Advertisement

ಲಂಚ ಪಡೆದ ಅಧಿಕಾರಿಗಳ ವಿರುದ್ಧ ಎಸಿಬಿ ತನಿಖೆ

05:30 AM May 15, 2020 | Lakshmi GovindaRaj |

ಬೆಂಗಳೂರು: ಸಿಗರೇಟ್‌ ವಿತರಕರನ್ನು ಬೆದರಿಸಿ ಹಣ ಸುಲಿಗೆ ಮಾಡಿದ್ದ ಸಿಸಿಬಿ ಎಸಿಪಿ ಪ್ರಭು ಶಂಕರ್‌, ಇನ್ಸ್‌ಪೆಕ್ಟರ್‌ಗಳಾದ ಅಜಯ್‌ ಹಾಗೂ ನಿರಂಜನ್‌ ವಿರುದ್ಧ ಎರಡು ಕಡೆ ಪ್ರತ್ಯೇಕ ತನಿಖೆ ಆರಂಭವಾಗಿದೆ. ಸುಲಿಗೆ ಆರೋಪ ಸಂಬಂಧ  ಕಾಟನ್‌ ಪೇಟೆ ಠಾಣೆಯಲ್ಲಿ ಎಸಿಪಿ, ಇನ್ಸ್‌ಪೆಕ್ಟರ್‌ಗಳ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ಪಶ್ಚಿಮ ವಿಭಾಗದ ಡಿಸಿಪಿ ರಮೇಶ್‌ ಬಾನೋಟ್‌  ಕಾರ್ಯನಿರ್ವಹಿಸಲಿದ್ದಾರೆ.

Advertisement

ಇದಲ್ಲದೆ ಸಿಸಿಬಿ ಡಿಸಿಪಿಗಳು ನಡೆಸಿದ ವಿಚಾರಣಾ ವರದಿ ಅವಲೋಕಿಸಿರುವ ಡಿಜಿಪಿ ಪ್ರವೀಣ್‌ ಸೂದ್‌, ಮೂವರು ಆರೋಪಿತ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಎಸಿಬಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿತರಾದ  ಎಸಿಪಿ, ಇನ್ಸ್‌ಪೆಕ್ಟರ್‌ಗಳ ವಿರುದ್ಧ ಎಸಿಬಿ ಪ್ರತ್ಯೇಕ ತನಿಖೆ ನಡೆಸಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.ಲಾಕ್‌ಡೌನ್‌ ಸಂದರ್ಭದಲ್ಲಿ ಸಿಗರೇಟ್‌ ವಿತರಕರಿಂದ ಎಸಿಪಿ ಪ್ರಭುಶಂಕರ್‌ ಇನ್ಸ್‌ಪೆಕ್ಟರ್‌ಗಳಾದ ಅಜಯ್‌,  ನಿರಂಜನ್‌ ಕುಮಾರ್‌ ಸೇರಿ ಒಟ್ಟು 1.75 ಕೋಟಿ ರೂ. ಸುಲಿಗೆ ಮಾಡಿದ್ದರು. ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಾಗ ಪ್ರಕರಣ ಬೆಳಕಿಗೆ ಬಂದಿತ್ತು. ತನಿಖೆ ಬಳಿಕ ಮೂವರು ಅಧಿಕಾರಿಗಳು ಸಸ್ಪೆಂಡ್‌ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next