Advertisement

ಹೆಚ್ವುವರಿ ಹಣ ವಸೂಲಿ: ಉಪ ನೊಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ…

10:20 AM Sep 07, 2019 | mahesh |

ಚಿಕ್ಕಬಳ್ಳಾಪುರ: ಜಿಲ್ಲೆಯ ರೇಷ್ಮೆ ನಗರಿ ಶಿಡ್ಲಘಟ್ಟ ತಾಲ್ಲೂಕು ಕಚೇರಿಯ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆಯೆಂಬ ಆರೋಪದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎಸಿಬಿ ಅಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Advertisement

ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ವೆಂಕಟೇಶ ನಾಯಡು ನೇತ್ರತ್ವದಲ್ಲಿ ದಾಳಿ ನಡೆಸಲಾಗಿದ್ದು ಸುಮಾರು ಒಂದು ಗಂಟೆಯಿಂದ ತಪಾಸಣೆ ನಡೆಸಲಾಗುತ್ತಿದೆ.

ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಸಿದ್ದು ಜಿಲ್ಲೆಯ ಅಧಿಕಾರಿಗಳ ವಲಯ ದಲ್ಲಿ ಸಂಚಲನ ಮೂಡಿಸಿದೆ.

ಶಿಡ್ಲಘಟ್ಟ ತಾಲೂಕು ಕಚೇರಿಯಲ್ಲಿ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ಬಿಗಿ ಪೋಲಿಸ್ ಭದ್ರತೆಯಲ್ಲಿ ದಾಖಲೆಗಳ ಪರೀಶಿಲನೆ ನಡೆಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next