Advertisement

ಭೋವಿ ಅಭಿವೃದ್ಧಿ ನಿಗಮದ ಎಂಡಿ ಮೇಲೆ ಎಸಿಬಿ ದಾಳಿ

10:38 PM May 19, 2022 | Team Udayavani |

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಡಾ| ನಾಗರಾಜಪ್ಪ ಮನೆ ಹಾಗೂ ಸಂಬಂಧಿಕರಿಗೆ ಸೇರಿದ ಐದು ಕಡೆಗಳಲ್ಲಿ ಬೆಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಸ್ತಿ-ಪಾಸ್ತಿಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

Advertisement

ವಿಜಯನಗರದ ಎಂ.ಸಿ. ಲೇಔಟ್‌ನಲ್ಲಿರುವ ನಾಗರಾಜಪ್ಪ ಮನೆ, ಅವರ ಸಹೋದರನ ನಿವಾಸ ಹಾಗೂ ಅವರಿಗೆ ಪರಿಚಯವಿರುವ ಮಾಗಡಿ ರಸ್ತೆಯ ಸನ್‌ಫ್ಲವರ್‌ ಅಪಾರ್ಟ್‌ಮೆಂಟ್‌ ನಿವಾಸಿ, ನಾಗರಾಜಪ್ಪಗೆ ಸೇರಿದ ಹೊಸಕೋಟೆ ತಾಲೂಕು ಬೆನ್ನಿಗಾನಹಳ್ಳಿಯಲ್ಲಿರುವ ಅವರ ಮನೆ ಹಾಗೂ ಚನ್ನಪಟ್ಟಣ ತಾಲೂಕಿನ ಹಾರೋಕೊಪ್ಪೆಯಲ್ಲಿರುವ ಸಂಬಂಧಿಕರ ಮನೆಗಳ ಏಕಕಾಲಕ್ಕೆ ದಾಳಿ ನಡೆಸಿದ್ದು, ಆಸ್ತಿ-ಪಾಸ್ತಿಗೆ ಸಂಬಂಧಿಸಿದ ಕೆಲವೊಂದು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next