Advertisement

1 ಲಕ್ಷ ರೂ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಪಟ್ಟಣ ಪಂಚಾಯತ್ ಕಂಪ್ಯೂಟರ್ ಆಪರೇಟರ್

06:09 PM Sep 25, 2020 | sudhir |

ಕೊಪ್ಪಳ: ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಕುಮಾರಸ್ವಾಮಿ ಹಿರೇಮಠ ಅವರು ಗುತ್ತಿಗೆದಾರನಿಂದ 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿರುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ.

Advertisement

ಕುಕನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಕೆಲಸದ ಬಿಲ್ ಮಾಡಿ ಕೊಡಲು ಪಪಂ ಕಂಪ್ಯೂಟರ್ ಆಪರೇಟರ್ ಕುಮಾರಸ್ವಾಮಿ ಅವರು ಗುತ್ತಿಗೆದಾರ ಅಬ್ದುಲ್ ಖಾದರ್ ಖಾಜಿಯಿಂದ 1 ಲಕ್ಷ ರೂಪಾಯಿ ಹಣದ ಬೇಡಿಕೆಯನ್ನಿಟ್ಟಿದ್ದರು.

ಈ ಕುರಿತು ಗುತ್ತಿಗೆದಾರನು ಎಸಿಬಿಗೆ ದೂರು ನೀಡಿದ್ದನು. ಕೊಪ್ಪಳ ಎಸಿಬಿ ಅಧಿಕಾರಿಗಳ ತಂಡವು ಪೂರ್ವ ತಯಾರಿ ನಡೆಸಿಕೊಂಡು ಎಸಿಬಿ ಇನ್ಸಪೆಕ್ಟರ್ ಬಾಲನಗೌಡ ಎಸ್. ಎಂ ಅವರ ನೇತೃತ್ವದಲ್ಲಿ ಕುಮಾರಸ್ವಾಮಿ 1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಬಂಧಿಸಿದ್ದಾರೆ. ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಿ ಅಧಿಕಾರಿ ಕುಮಾರಸ್ವಾಮಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next