Advertisement

ದೇವಸ್ಥಾನಕ್ಕೆ ಮಂಜೂರಾಗಿದ್ದ ಅನುದಾನ ಬಿಡುಗಡೆಗೆ ಲಂಚ : ಮುಜರಾಯಿ ತಹಶೀಲಾರ್‌ ಎಸಿಬಿ ಬಲೆಗೆ

03:36 PM Jan 23, 2022 | Team Udayavani |

ಬೆಳಗಾವಿ: ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮಂಜೂರಾಗಿದ್ದ ಅನುದಾನ ಬಿಡುಗಡೆಗಾಗಿ ಲಂಚ ಕೇಳಿದ್ದ ಬೆಳಗಾವಿ ಮುಜರಾಯಿ ಇಲಾಖೆ ತಹಶೀಲ್ದಾರ್‌ ಹಾಗೂ ಇವರ ಸಂಬಂಧಿಯನ್ನು ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ)ದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

Advertisement

ಮುಜರಾಯಿ ತಹಶೀಲ್ದಾರ್‌ ದಶರಥ ನಕುಲ ಜಾಧವ ಹಾಗೂ ಸಂಬಂಧಿ ಸಂತೋಷ ಕಡೋಲಕರ ಬಂಧಿತರು. ರಾಮದುರ್ಗ ಪಟ್ಟಣದ ಶ್ರೀ ದುರ್ಗಾದೇವಿ ಮತ್ತು ಯಕ್ಕೇರಮ್ಮ ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಜರಾಯಿ ಇಲಾಖೆ ಆರಾಧನಾ ಸ್ಕೀಂ ಅಡಿ 4 ಲಕ್ಷ ರೂ. ಮಂಜೂರಾಗಿತ್ತು. ಅನುದಾನ ಬಿಡುಗಡೆಗಾಗಿ ನಕುಲ ಜಾಧವ 20 ಸಾವಿರ ರೂ. ಬೇಡಿಕೆ ಇಟ್ಟಿದ್ದರು.

ದೇವಸ್ಥಾನದ ಸುಭಾಷ ಘೋಡಕೆ ಎಂಬವರು ಎಸಿಬಿಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ತಹಶೀಲ್ದಾರ್‌ ಪರ ಲಂಚ ಸ್ವೀಕರಿಸುತ್ತಿದ್ದ ಆತನ ಸಂಬಂಧಿ ಸಂತೋಷನನ್ನು ಬಂಧಿಸಿದ್ದಾರೆ. ಬಳಿಕ ಇದೇ ಪ್ರಕರಣದಲ್ಲಿ ತಹಶೀಲ್ದಾರ್‌ ಜಾಧವ ಅವರನ್ನೂ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ ಎಸಿಬಿ ಎಸ್ಪಿ ಬಿ.ಎಸ್‌. ನೇಮಗೌಡ ಮಾರ್ಗದರ್ಶನ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ಅಡಿವೇಶ ಗುದಿಗೊಪ್ಪ, ಸುನೀಲಕುಮಾರ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next