Advertisement

ರೈತನಿಂದ ಲಂಚ ಪಡೆಯುತ್ತಿದ್ದ ಭೂ ದಾಖಲೆ ವಿಭಾಗ ಅಧಿಕಾರಿ: ಎಸಿಬಿ ದಾಳಿ

03:10 PM Feb 05, 2021 | Team Udayavani |

ಮಂಡ್ಯ: ಶ್ರೀರಂಗಪಟ್ಟಣದಲ್ಲಿನ ತಾಲೂಕು ಕಚೇರಿಯ ಕಂದಾಯ ಇಲಾಖೆ ವಿಭಾಗದ ಮೇಲೆ ಎಸಿಬಿ ದಾಳಿ ನಡೆಸಲಾಗಿದ್ದು, ರೈತನಿಂದ ಲಂಚ ಪಡೆಯುತ್ತಿದ್ದ ಭೂ ದಾಖಲೆ ವಿಭಾಗದ ಮುಖ್ಯಸ್ಥ ಮಂಜುನಾಥ್ ಸಿಕ್ಕಿಬಿದ್ದಿದ್ದಾರೆ.

Advertisement

ಎಸಿಬಿ ಡಿವೈಎಸ್ಪಿ ಧರಣೇಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು,ರೈತ ದಿನೇಶ್ ಎಂಬವರಿಂದ ಮೂರು ಸಾವಿರ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ:ಶೃಂಗೇರಿಯ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ತನಿಖಾಧಿಕಾರಿ ಸಸ್ಪೆಂಡ್

ಕಚೇರಿ ಬಾಗಿಲು ಹಾಕಿಕೊಂಡು ಎಸಿಬಿ ಅಧಿಕಾರಿಗಳು ಮಂಜುನಾಥ್ ಕಚೇರಿ ಪರಿಶೀಲನೆ ನಡೆಸಿದರು.

ಪಟ್ಟಣದ ತಾಲೂಕು ಕಚೇರಿಯ ಮುಂದೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next