Advertisement

ಬೆಂಗಳೂರಿನ 9 ಕಡೆ ಎಸಿಬಿ ದಾಳಿ; ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಅಧಿಕಾರಿಗಳ ರೇಡ್!

03:24 PM Mar 22, 2022 | Team Udayavani |

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನ 9 ಕಡೆಗಳಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

Advertisement

ಎಸ್​ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಇನ್ನಿತರ ಜಾಗಗಳ ಮೇಲೆ ದಾಳಿ ನಡೆದಿದ್ದು, ಕಡತಗಳ ಪರಿಶೀಲನೆ ನಡೆಯುತ್ತಿದೆ.

ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ.

ಇದನ್ನೂ ಓದಿ:ಆಗಸ್ಟ್‌ನಲ್ಲಿ 4ನೇ ಅಲೆ; ಎದುರಿಸಲು ಸನ್ನದ್ಧ: ಭಯ ಬೇಡ, ಎಚ್ಚರಿಕೆ ಇರಲಿ: ಸಚಿವ ಸುಧಾಕರ್‌

Advertisement

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದ ಮಧ್ಯವರ್ತಿಗಳ ನಿವಾಸದ ಮೇಲೆಯೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿಗೊಳಗಾದ ಅಧಿಕಾರಿಗಳ ಮಾಹಿತಿ

1) ರಾಘು ಬಿ.ಎನ್, ಚಾಮರಾಜಪೇಟೆ

2) ಮೋಹನ್, ಮನೋರಾಯನಪಾಳ್ಯ, ಆರ್ ಟಿ ನಗರ

3) ಮನೋಜ್, ದೊಮ್ಮಲೂರು

4) ಮುನಿರತ್ನ, ಮಲ್ಲತಹಳ್ಳಿ

5) ತೇಜು ಅಲಿಯಾಸ್​ ತೇಜಸ್ವಿ, ಆರ್ ಆರ್ ನಗರ

6) ಅಶ್ವಥ್, ಮುದ್ದಿನಪಾಳ್ಯ, ಮಲ್ಲತಹಳ್ಳಿ

7) ರಾಮ, ಚಾಮುಂಡೇಶ್ವರಿನಗರ ಬಿಡಿಎ ಲೇಔಟ್

8) ಲಕ್ಷ್ಮಣ, ಚಾಮುಂಡೇಶ್ವರಿನಗರ ಬಿಡಿಎ ಲೇಔಟ್

9) ಚಿಕ್ಕಹನುಮಯ್ಯ, ಮುದ್ದಿನಪಾಳ್ಯ

Advertisement

Udayavani is now on Telegram. Click here to join our channel and stay updated with the latest news.

Next