Advertisement

ಎಸಿಬಿಯಿಂದ ಭ್ರಷ್ಟರ ಬೇಟೆ: ನೀರಿನ ಪೈಪ್ ನಿಂದ ಉದುರಿದ ನೋಟಿನ ಕಂತೆಗಳು

02:51 PM Nov 24, 2021 | Team Udayavani |

ಕಲಬುರಗಿ: ಇಲ್ಲಿ ಬುಧವಾರ ನಡೆದ ಎಸಿಬಿ ದಾಳಿ ವೇಳೆ ನೀರಿನ ಪೈಪ್ ನಲ್ಲಿ ಕಂತೆ ಕಂತೆ ನೋಟುಗಳನ್ನು ಕಂಡು ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.

Advertisement

ಲೋಕೋಪಯೋಗಿ ಇಲಾಖೆಯ ಜೆಇ ಶಾಂತಗೌಡ ಬಿರಾದಾರ ಮನೆ ಮೇಲೆ ಎಸಿಬಿ ದಾಳಿ ವೇಳೆ ನೀರಿನ ಪೈಪ್ ನಲ್ಲಿ ಹಣ ಪತ್ತೆಯಾಗಿದೆ. ಎಸಿಬಿ ದಾಳಿ ನಡೆದಾಗ ಹಣವನ್ನು ಪೈಪ್ ನಲ್ಲಿ ತುಂಬಿರುವ ಶಂಕೆ ವ್ಯಕ್ತವಾಗಿದೆ.

ಅಧಿಕಾರಿಗಳು ಮನೆಯಲ್ಲಿ ಶೋಧ ನಡೆಸುತ್ತಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ರಾಜ್ಯದ 68 ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಭಾರಿ ಪ್ರಮಾಣದ ಚಿನ್ನಾಭರಣ, ನಗದು ಪತ್ತೆಯಾಗಿದೆ.

ಇದನ್ನೂ ಓದಿ : ಶಿವಮೊಗ್ಗದಲ್ಲಿ ಸಂಪತ್ತಿನ ಭಾರಿ ಕೃಷಿ ಮಾಡಿದ ಅಧಿಕಾರಿ: ಎಸಿಬಿ ಸುಸ್ತು!

Advertisement

ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಹಿನ್ನಲೆಯಲ್ಲಿ 408 ಎಸಿಬಿ ಅಧಿಕಾರಿಗಳು ರಾಜ್ಯದಾಧ್ಯಂತ ಏಕ ಕಾಲದಲ್ಲಿ  ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next