Advertisement

ನಿರ್ಮಿತಿ ಕೇಂದ್ರದ ಯೋಜನಾ ಅಧಿಕಾರಿ ಕಛೇರಿ, ಮನೆಗಳ ಮೇಲೆ ಎಸಿಬಿ ದಾಳಿ

09:29 AM Mar 16, 2022 | Team Udayavani |

ವಿಜಯಪುರ: ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ  ಗೋಪಿನಾಥ, ಲೆಕ್ಕಾಧಿಕಾರಿ ಮಲ್ಲಮ್ಮ ಅವರ ಕಛೇರಿ, ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ಬು‍ಧವಾರ ದಾಳಿ ನಡೆಸಿದ್ದಾರೆ.

Advertisement

ನಗರದಲ್ಲಿರುವ ಗೋಪಿನಾಥಸಾ ಮಲಜಿ ನಿವಾಸ, ಕಚೇರಿ, ಸ್ಟೋರ್ ಹಾಗೂ ಕಚೇರಿ ಸಿಬ್ಬಂದಿ ನಿವಾಸದ ಮೇಲೆ ಎಸಿಬಿ ಡಿಎಸ್ಪಿ ಮಂಜುನಾಥ ಗಂಗಲ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ.

ಬಾಗಲಕೋಟೆ‌ ಜಿಲ್ಲೆಯಲ್ಲಿರುವ ಗೋಪಿನಾಥ ಸಂಬಂಧಿಗಳ ಎರಡು ಮನೆಗಳ ಮೇಲೆಯೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿರ್ಮಿತಿ‌ ಕೇಂದ್ರದ ಕಚೇರಿ ಹಾಗೂ ಸ್ಟೋರ್ ನಲ್ಲಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ.

ಎಸಿಬಿ ಅಧಿಕಾರಿಗಳ ವಿವಿಧ ತಂಡಗಳು ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ನಿವಾಸ, ದರ್ಗಾ ಪ್ರದೇಶದಲ್ಲಿರುವ ಕಚೇರಿ ಹಾಗೂ ಸ್ಟೋರ್ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಅಕ್ರಮ ಆಸ್ತಿ ಗಳಿಕೆ ಆರೋಪ: ಅಣ್ಣಿಗೇರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

Advertisement

ಇದಲ್ಲದೇ ನಿರ್ಮಿತಿ ಕೇಂದ್ರದ ಲೆಕ್ಕಾಧಿಕಾರಿ ಮಲ್ಲಮ್ಮ ಅವರ ರಾಮದೇವ್ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next