Advertisement

ಪಂಚಾಯತ್ ರಾಜ್ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ

09:53 AM Oct 03, 2019 | Team Udayavani |

ಬೀದರ: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

Advertisement

ಹುಮನಾಬಾದ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ವಿಜಯ ರೆಡ್ಡಿ ಅವರ ಹುಮನಾಬಾದ ನಗರದ ಮನೆ ಹಾಗೂ ಸ್ವಗ್ರಾಮ ನಿರ್ಣಾ ಗ್ರಾಮದಲ್ಲಿನ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಸಂಪತ್ತು ಗಳಿಕೆ ದೂರು ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಎಸಿಬಿ ಎಸ್‌ಪಿ ವಿ.ಎಂ ಜ್ಯೋತಿ ಮಾರ್ಗದರ್ಶನದಲ್ಲಿ ಬೀದರ್ ಡಿವೈಎಸ್‌ಪಿ ಬಿ.ಬಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next