ವಿಜಯಪುರ : ನಗರದಲ್ಲಿರುವ ಆರ್.ಟಿ.ಓ. ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳು ಹಾಗೂ ನಗದನ್ನು ವಶಕ್ಜೆ ಪಡೆದಿರುವ ಘಟನೆ ಗುರುವಾರ ನಡೆದಿದೆ.
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಕಛೇರಿ ಅವಧಿ ಮುಕ್ತಾಯದ ಹಂತದಲ್ಲಿ ಎಸಿಬಿ ಎಸ್ಪಿ ಅಮರನಾಥರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಜನರಿಂದ ನಿಗದಿತ ಹಣಕ್ಕಿಂತ ಹೆಚ್ಚಿನ ಹಣ ಸಂಗ್ರಹ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ದಾಳಿ ವೇಳೆ ಸುಮಾರು 2.50 ಲಕ್ಷ ರೂ. ವಶಕ್ಕೆ ಪಡೆದಿದ್ದಾಗಿ ಎಸಿಬಿ ಎಸ್ಪಿ ಅಮರನಾಥ ರಡ್ಡಿ ಮಾಹಿತಿ ನೀಡಿದ್ದಾರೆ.
ದಾಳಿಯ ವೇಳೆ ಆರ್.ಟಿ.ಓ. ಕಛೇರಿಯ 20 ಜನ ಏಜೆಂಟರಿಂದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು.
ನಾಯ್ಯಾಲಯದ ವಾರೆಂಟ್ ಪಡೆದು ಕೆಲವು ಅಂಗಡಿಗಳನ್ನು ಸೀಜ್ ಮಾಡಲಾಗಿದೆ. ಕೆಲವು ಅಧಿಕಾರಿಗಳ ವಿಚಾರಣೆ ನಡೆಯುತ್ತಿದೆ ಎಂದಿದ್ದಾರೆ.