Advertisement

ಆರ್ ಟಿಒ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ

09:56 AM Dec 28, 2019 | keerthan |

ರಾಯಚೂರು: ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ತಂಡ ದಾಳಿ ಶುಕ್ರವಾರ ನಡೆಸಿದೆ.

Advertisement

ಕಚೇರಿಯಲ್ಲಿ ಸಾಕಷ್ಟು ಅಕ್ರಮ ನಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಸಲ್ಲಿಕೆಯಾಗಿದ್ದವು.

ಎಸಿಬಿ ಡಿವೈಎಸ್ಪಿ ಸಂತೋಷ ಬನ್ನಟ್ಟಿ ನೇತೃತ್ವದಲ್ಲಿ ಸುಮಾರು 30 ಜನ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ದಾಳಿಯಲ್ಲಿ ಬಳ್ಳಾರಿ, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಸಾರ್ವಜನಿಕರಿಗೆ ಕಚೇರಿಯೊಳಗೆ ಪ್ರವೇಶ ನಿರ್ಬಂಧ ಹೇರಿದ್ದು, ಅಗತ್ಯ ದಾಖಲೆಗಳು ಪರಿಶೀಲನೆ ನಡೆಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next