Advertisement

ಬೆಳ್ಳಂಬೆಳಗ್ಗೆ ಹುಬ್ಬಳ್ಳಿ,ಕೋಲಾರ ಸೇರಿದಂತೆ ರಾಜ್ಯದ ಹಲವೆಡೆ ACB ದಾಳಿ: ದಾಖಲೆಗಳ ಪರಿಶೀಲನೆ

09:27 AM Feb 02, 2021 | Team Udayavani |

ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಎಇಇ ದೇವರಾಜ ಕೆ. ಶಿಗ್ಗಾವಿ ಅವರ ನಿವಾಸ ಮತ್ತು ತಾಯಿ ಹಾಗೂ ಮಾವನ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ಏಕಕಾಲಕ್ಕೆ ದಾಳಿ ಮಾಡಿ, ಆದಾಯಕ್ಕಿತ ಹೆಚ್ಚಿನ ಚರ-ಚಿರಾಸ್ತಿಯ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ.

Advertisement

ದೇವರಾಜ ಅವರ ಇಲ್ಲಿನ ಅಕ್ಷಯ ಪಾರ್ಕ್ ಬಳಿಯ ರಾಜೀವ ನಗರ ನಿವಾಸ ಹಾಗೂ ಇವರ ತಾಯಿಯ ಗೋಕುಲ ರಸ್ತೆ ಕೋಟಿಲಿಂಗನಗರ ಹಾಗೂ ಇವರ  ಮಾವನ ಬೆಂಗೇರಿ ಬಳಿಯ ಬಾಲಾಜಿ ನಗರದ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ, ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.

ಹುಬ್ಬಳ್ಳಿ ಮಾತ್ರವಲ್ಲದೆ ಬೆಂಗಳೂರು, ಕೋಲಾರ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.  ಆಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ಕೋಲಾರ ಡಿ ಎಚ್ ಓ ಮನೆ ಮೇಲೂ ದಾಳಿ ನಡೆಸಲಾಗಿದೆ.  ಮುಳುಬಾಗಿಲಿನಲ್ಲಿರುವ ಮನೆ ಹಾಗೂ ಅವರ ಖಾಸಗಿ ಆಸ್ಪತ್ರೆ, ಚಿಂತಾಮಣಿಯಲ್ಲಿರುವ ಮನೆ ಮತ್ತು ಬೆಂಗಳೂರಿನಲ್ಲಿರುವ ಫ್ಲ್ಯಾಟ್ ಸೇರಿದಂತೆ ಆರು ಕಡೆಗಳಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next