Advertisement

ಶಿವಮೊಗ್ಗ: 70 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ದಾಳಿ ; ಭ್ರಷ್ಟ ಪಿಡಿಓ ಅರೆಸ್ಟ್

07:10 PM Jan 11, 2022 | Team Udayavani |

ಶಿವಮೊಗ್ಗ: ಲಂಚ ಸ್ವೀಕರಿಸುವಾಗ ಪಿಡಿಓಯೊಬ್ಬರು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.

Advertisement

ಬಿಳಕಿ ಗ್ರಾಮ ಪಂಚಾಯತ್ ಪಿಡಿಒ ಡಿ.ಕೇಶವಮೂರ್ತಿ ಎಸಿಬಿ ಕೈಗೆ ಸಿಕ್ಕಿಬಿದ್ದ ಅಧಿಕಾರಿ.

ಜಮೀನಿಗೆ ಸಂಬಂಧಿತ ಎನ್ಓಸಿ ನೀಡಲು 1 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪಿಡಿಓ ಈ ಹಿಂದೆ 5  ಸಾವಿರ ಲಂಚ ಪಡೆದುಕೊಂಡಿದ್ದ. 70 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಶಿವಮೊಗ್ಗ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾನೆ.

ಸದ್ಯ ಪಿಡಿಓ ಕೇಶವಮೂರ್ತಿಯನ್ನು ಬಂಧಿಸಿ, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.ದಾಳಿಯಲ್ಲಿ ಇನ್ಸ್ಪೆಕ್ಟರ್ ವಸಂತ್ ಕುಮಾರ್, ಪಿಎಸ್ಐ ಇಮ್ರಾನ್ ಬೇಗ್ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next