Advertisement

ಸುಳ್ಳು ಮಾಹಿತಿ: ಎಸಿಬಿ ತನಿಖೆ ಆರಂಭ

06:50 PM Jul 14, 2022 | Team Udayavani |

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರೆ ಸಂಧ್ಯಾ ರಾಮಚಂದ್ರ ಗೌಡ ಕೈಲಾಜೆಯವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಗೊಂಡಿದೆ.

Advertisement

ಕೋಡಿಂಬಾಡಿ ಗ್ರಾಮ ಪಂಚಾಯತ್‌ ಸದಸ್ಯರಾದ ಜಯಪ್ರಕಾಶ್‌ ಬದಿನಾರು ಮತ್ತು ಜಗನ್ನಾಥ ಶೆಟ್ಟಿ ನಡುಮನೆ ಅವರು ಎಸಿಬಿಗೆ ಪ್ರತ್ಯೇಕ ದೂರು ನೀಡಿದ್ದರು. ದೂರು ಸ್ವೀಕರಿಸಿರುವ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಪ್ರಕರಣದ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸುಳ್ಳು ಮಾಹಿತಿ ನೀಡಿ ಉದ್ಯೋಗ ಪಡೆದಿದ್ದಾರೆ ಎನ್ನುವ ಬಗ್ಗೆ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next