Advertisement

ಚಿತ್ರದುರ್ಗ:  ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಪಿಡಿಒ

04:01 PM Jul 06, 2021 | Team Udayavani |

ಚಿತ್ರದುರ್ಗ: ಲಂಚ ಸ್ವೀಕರಿಸುವ ವೇಳೆ ಗ್ರಾ.ಪಂ ಪಿಡಿಒಯೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ಹೊಳಲ್ಕೆರೆ ತಾಲ್ಲೂಕಿನ  ಟಿ. ನುಲೇನೂರುನಲ್ಲಿ. ನಡೆದಿದೆ.

Advertisement

ಟಿ. ನುಲೇನೂರು ಗ್ರಾ.ಪಂ‌ ಪಿಡಿಒ. ಶ್ರೀನಿವಾಸ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಮನೆಯ ಇ ಸ್ವತ್ತು ಹಾಗೂ ಜಾಬ್ ಕಾರ್ಡ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೇಳೆ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಗ್ರಾಮದ ನಿವಾಸಿಯಾಗಿರುವ ಗುರುಶಾಂತಪ್ಪ ಎಂಬುವವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ, ಕೆಲಸ ಮಾಡಿಕೊಡಲು 2 ಸಾವಿರ ಬೇಡಿಕೆ ಇಟ್ಟಿದ್ದರು. ಈ ಕುರಿತು ಎಸಿಬಿಗೆ ದೂರು ನೀಡಿದ್ದ ಗುರುಶಾಂತಪ್ಪ, ಇಂದು 2 ಸಾವಿರ ರೂಪಾಯಿಯನ್ನು ಪಿಡಿಒಗೆ ಕೊಡುವಾಗ, ಲಂಚ ಪಡೆಯಲು ಮುಂದಾಗಿದ್ದ ಪಿಡಿಒ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ಎಸಿಬಿ ಡಿವೈಎಸ್ಪಿ ಬಸವರಾಜ್ ಮಗದುಮ್ ನೇತೃತ್ವದಲ್ಲಿ ದಾಳಿ ನಡೆಸಿ. ಶ್ರೀನಿವಾಸ್ ವಶಕ್ಕೆ ಪಡೆದು ವಿಚಾರಣೆ ಮಾಡಿ, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next