Advertisement

ಹನೂರು: ಲಂಚಕ್ಕೆ ಬೇಡಿಕೆಯಿಟ್ಟ ಗ್ರಾಮಲೆಕ್ಕಿಗ ಎಸಿಬಿ ಬಲೆಗೆ

04:37 PM Apr 27, 2022 | Team Udayavani |

ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಗ್ರಾಮಲೆಕ್ಕಿಗ ದಿನೇಶ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

Advertisement

ಗ್ರಾಮಲೆಕ್ಕಿಗ ದಿನೇಶ್ ಅವರು ರಾಮಪುರ ಹೋಬಳಿಯ ಕುರಟ್ಟಿ ಹೊಸೂರು ವೃತ್ತದ ಗ್ರಾಮಲೆಕ್ಕಿಗ ರಾಗಿದ್ದು ಜಮೀನಿನ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 10000 ರೂಪಾಯಿಗೆ ಬೇಡಿಕೆಯಿಟ್ಟಿದ್ದರು.

ಈ ಬಗ್ಗೆ ಬಂದ ದೂರಿನ ಮೇರೆಗೆ ಡಿವೈಎಸ್ಪಿ ಸದಾನಂದ ತಿಪ್ಪಣ್ಣವರ ಇನ್ಸ್ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿಗಳಾದ ನಾಗಲಕ್ಷ್ಮಿ ಮಹದೇವಸ್ವಾಮಿ ಕೃಷ್ಣಕುಮಾರ್ ದಾಳಿ ನಡೆಸಿದರು.

ಈ ವೇಳೆ ಡಿವೈಎಸ್ಪಿ ಸದಾನಂದ ತಿಪ್ಪಣ್ಣವರ ಉದಯವಾಣಿಯೊಂದಿಗೆ ಮಾತನಾಡಿ ಯಾವುದೇ ಕಾರಣಕ್ಕೂ ದೂರುದಾರರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ವಶಕ್ಕೆ ಪಡೆದಿರುವ ಗ್ರಾಮಲೆಕ್ಕಾಧಿಕಾರಿಯನ್ನು ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಿ ಮೇಲಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next