Advertisement

ಆಕಾಂಕ್ಷಿಗಳಿಗೀಗ ಸಮನ್ವಯ ಒತ್ತಡ

06:00 AM Dec 05, 2018 | Team Udayavani |

ಬೆಂಗಳೂರು: ಸಮ್ಮಿಶ್ರ ಸರಕಾರ ಸುಸೂತ್ರವಾಗಿ ನಡೆಯಲು ರಚಿಸಲಾಗಿರುವ ಸಮನ್ವಯ ಸಮಿತಿ ಸಭೆ ಬಹುಸಮಯದ ಬಳಿಕ ಬುಧವಾರ ಜರಗಲಿದೆ. ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕ ಕುರಿತು ಚರ್ಚಿಸಿ, ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ಸಭೆಯಲ್ಲಿ  ಸಮನ್ವಯ ಮೂಡಿದಲ್ಲಿ ಡಿ.8 ಅಥವಾ 9ರಂದು ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಲಿದೆ ಎಂದು ಹೇಳಲಾಗಿದೆ. ಆ.31ರಂದು ನಡೆದಿದ್ದ 3ನೇ ಸಮನ್ವಯ ಸಮಿತಿ ಸಭೆ ಬಳಿಕ ಸೆಪ್ಟಂಬರ್‌ ಮೂರನೇ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದರೂ ಆಗಿರಲಿಲ್ಲ. ಜತೆಗೆ ವಿಸ್ತರಣೆಗಿದ್ದ ಉಪ ಚುನಾವಣೆ ಅಡ್ಡಿಯೂ ಈಗ ನಿವಾರಣೆಯಾಗಿದ್ದು, ಸಚಿವಾಕಾಂಕ್ಷಿಗಳು ಈ ಸಭೆಯತ್ತಲೇ ಚಿತ್ತ ನೆಟ್ಟಿದ್ದಾರೆ. 

Advertisement

ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ. ಜೆಡಿಎಸ್‌ ಸಚಿವರು ಇರುವ ಕಡೆ ಕಾಂಗ್ರೆಸ್‌ ಶಾಸಕರ ಶಿಫಾ ರಸುಗಳಿಗೆ ಬೆಲೆ ಕೊಡುತ್ತಿಲ್ಲ. ಸಮ್ಮಿಶ್ರ ಸರಕಾರಕ್ಕೆ ಕಾಂಗ್ರೆಸ್‌ ಬೆಂಬಲ ಕೊಟ್ಟಿದ್ದರೂ ಸ್ಥಳೀಯ ಮಟ್ಟದಲ್ಲಿ ಜೆಡಿಎಸ್‌ ಪ್ರಾಬಲ್ಯ ಹೆಚ್ಚುತ್ತಿದೆ ಎಂಬೆಲ್ಲ ದೂರುಗಳ ಬಗ್ಗೆಯೂ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಆಪರೇಷನ್‌ ಕಮಲದ ಚರ್ಚೆಮತ್ತೂಮ್ಮೆ ಬಿಜೆಪಿ ಆಪರೇಷನ್‌ ಕಮಲ ಕಾರ್ಯಾಚರಣೆ ಆರಂಭಿಸಿದೆ ಎಂಬ ಮಾತುಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಹಿಂದಿನ ಸರಕಾರದ ಯೋಜನೆಗಳ ಜಾರಿ, ಸಿದ್ದರಾಮಯ್ಯ ಬಜೆಟ್‌ನಲ್ಲಿ  ಘೋಷಿಸಿದ ಕಾರ್ಯಕ್ರಮಗಳ ಅನುಷ್ಠಾನ ಎಲ್ಲವೂ ಚರ್ಚೆಗೆ ಬರಲಿದೆ. ಜತೆಗೆ ಸಾಮಾನ್ಯ ಕಾರ್ಯಸೂಚಿ ಕುರಿತು ಪ್ರಸ್ತಾವವಾಗಲಿದೆ ಎಂದು ಹೇಳಲಾಗಿದೆ.

ಹಿರಿಯ ನಾಯಕರ ಸಭೆ
ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸ ಬೇಕಾದ ವಿಷಯಗಳ ಬಗ್ಗೆ ಚರ್ಚಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಬುಧವಾರ ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿ ಯಲ್ಲಿ ಹಿರಿಯ ನಾಯಕರ ಸಭೆ ಕರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next