Advertisement

ಲಂಚ ಸ್ವೀಕಾರ: ಅಧಿಕಾರಿ ಎಸಿಬಿ ಬಲೆಗೆ

04:04 PM May 27, 2020 | Suhan S |

ಗದಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಟ್ಯಾಕ್ಸಿ ಖರೀದಿಗೆ ಸಬ್ಸಿಡಿ ಹಣ ಬಿಡುಗಡೆ ಮಾಡಲು 40 ಸಾವಿರ ರೂ. ಲಂಚ ಪಡೆಯುತ್ತಿದ್ದ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಾಕೀರ್‌ ಹುಸೇನ್‌ ಹಾಗೂ ಕಂಪ್ಯೂಟರ್‌ ಆಪರೇಟರ್‌ ಅಕ್ಬರ್‌ ಎಸಿಬಿ ಬಲೆಗೆ ಬಿದ್ದಿದ್ದಾರೆ.

Advertisement

ನರಗುಂದ ನಿವಾಸಿ ಫಾರುಖ್‌ ಅಹ್ಮದ್‌ ಖಾನಸಾಬ್‌ ಬಿದರಕುಂದಿ ಎಂಬುವವರು ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ಖರೀದಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದು, ಜಿಲ್ಲಾಧಿಕಾರಿಗಳು ಆಯ್ಕೆ ಮಾಡಿದ್ದರು. ಅದಕ್ಕೆ ಸಂಬಂ ಧಿಸಿ ಇತ್ತೀಚೆಗೆ 3 ಲಕ್ಷ ಸಬ್ಸಿಡಿ ಹಣ ಮಂಜೂರಾಗಿದ್ದು, ಹಣ ಬಿಡುಗಡೆಗೆ 40 ಸಾವಿರ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಅದರಂತೆ ದೂರುದಾರರಿಂದ ಲಂಚ ಪಡೆಯುತ್ತಿರುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ನಗದು ಹಣ ಸಮೇತ ವ್ಯವಸ್ಥಾಪಕ ಜಾಕೀರ್‌ ಹುಸೇನ್‌ ಹಾಗೂ ಕಂಪ್ಯೂಟರ್‌ ಆಪರೇಟರ್‌ ಅಕ್ಬರ್‌ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next