Advertisement

ಮಾಹಿತಿ ಆಯುಕ್ತರ ಪ್ರಮಾಣ ವಚನ ಸ್ವೀಕಾರ

11:29 PM May 06, 2019 | Team Udayavani |

ಬೆಂಗಳೂರು: ಕಾನೂನು ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಎನ್‌.ಸಿ.ಶ್ರೀನಿವಾಸ ಅವರು ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Advertisement

ರಾಜಭವನದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್‌ ವಾಲಾ ಅವರು ಶ್ರೀನಿವಾಸ ಅವರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು. ಇದೇ ಸಂದರ್ಭದಲ್ಲಿ ಎಸ್‌.ಎಂ.ಸೋಮಶೇಖರ ಮತ್ತು ಕೆ.ಪಿ.ಮಂಜುನಾಥ ಅವರು ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಶ್ರೀನಿವಾಸ್‌ ಮತ್ತು ಸೋಮಶೇಖರ ಅವರು ಆಂಗ್ಲ ಭಾಷೆಯಲ್ಲಿ, ಮಂಜುನಾಥ ಅವರು ಕನ್ನಡ ಭಾಷೆಯಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಇದಕ್ಕೂ ಮುಖ್ಯ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ ಅವರು ಮೂವರ ನೇಮಕಾತಿ ಅಧಿಸೂಚನೆ ವಾಚಿಸಿದರು.

ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥಶೆಟ್ಟಿ, ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಾಧೀಶ ಎಲ್‌.ನಾರಾಯಣಸ್ವಾಮಿ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಚಿವರಾದ ಸಿ.ಎಸ್‌.ಪುಟ್ಟರಾಜು, ವಿಧಾನಪರಿಷತ್‌ ಸದಸ್ಯ ತಿಪ್ಪೇಸ್ವಾಮಿ, ಶಾಸಕ ಬಾಲಕೃಷ್ಣ,, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕಾರ್ಯದರ್ಶಿ ಎಸ್‌.ಸೆಲ್ವಕುಮಾರ್‌, ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next