Advertisement

ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

11:46 PM Oct 21, 2019 | Lakshmi GovindaRaju |

ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿ ನೂತನ ಅಧ್ಯಕ್ಷರಾಗಿ ಚಿತ್ರ ಕಲಾವಿದ ಡಿ.ಮಹೇಂದ್ರ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಲಲಿತಕಲಾ ಅಕಾಡೆಮಿಯ ಈ ಹಿಂದಿನ ಅಧ್ಯಕ್ಷರ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವುದರ ಜತೆಗೆ ಕೆಲವು ಹೊಸ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು. ಎಲ್ಲಾ ಕ್ಷೇತ್ರಗಳಲ್ಲೂ ಹಲವು ರೀತಿಯ ಬದಲಾವಣೆಗಳಾಗಿವೆ.

Advertisement

ಇದಕ್ಕೆ ಹೊಂದಿಕೊಂಡು ಅಕಾಡೆಮಿ ಕಟ್ಟಲಾಗುವುದು. ಜತೆಗೆ ಡಿಜಿಟಲೀಕರಣಕ್ಕೆ ಆದ್ಯತೆ ನೀಡಲಾಗುವುದು ಎಂದರು. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕೆಲವು ಕಾರ್ಯಕ್ರಮಗಳಿಗೆ ಸರ್ಕಾರ ನೀಡಿದ್ದ ಅನುದಾನ ಬಳಕೆ ಮಾಡಿಕೊಳ್ಳಲು ಅಕಾಡೆಮಿಗೆ ಆಗಿರಲಿಲ್ಲ. ಆ ಅನುದಾನವನ್ನು ಈ ಬಾರಿ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲಾಗುವುದು ಎಂದರು. ರಿಜಿಸ್ಟ್ರಾರ್‌ ಡಾ.ಶೈಲಜಾ ಸೇರಿ ಅಕಾಡೆಮಿ ಸದಸ್ಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next