Advertisement

ರಸ್ತೆ ಅಪಘಾತ: ಒಂದೇ ಕುಟುಂಬದ ಐವರ ಸಾವು

06:41 PM Mar 16, 2019 | Team Udayavani |

ನೆಲಮಂಗಲ: ತಾಲೂಕಿನ ಯಂಟಗಾನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ನಾಯಂಡಹಳ್ಳಿ ಪಂತರಪಾಳ್ಯದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಮೃತರನ್ನು ಏಳು ಮಲೈ(43), ಕಮಲಾ(35), ಗೀತಾ(10), ಕಿರಣ್‌(13), ಗಿರಿಧರ್‌(14)ಎಂದು ಗುರುತಿಸಲಾಗಿದೆ.

Advertisement

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದ ಮಂಜುನಾಥ ಸ್ವಾಮಿ ದರ್ಶನ ಪಡೆದು ಮನೆಗೆ ಹಿಂತಿರುಗುವ ವೇಳೆ ಜವರಾಯನ ಅಟ್ಟ ಹಾಸಕ್ಕೆ ಬಲಿಯಾಗಿದ್ದಾರೆ.ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹಾಸನದಿಂದ ಬೆಂಗಳೂರಿಗೆ ಬರು ತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಡಿವೈಡರ್‌ಗೆ ಅಪ್ಪಳಿಸಿದೆ. ನಂತರ ಬೆಂಗಳೂರಿನಿಂದ ಹಾಸನದ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್‌ಆರ್‌ ಟಿಸಿ ಐರಾವತ ಬಸ್‌ಗೆ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್‌ನಲ್ಲಿದ್ದ 35 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next