Advertisement

ಅಪಘಾತ: ನಗರದ ಒಂದೇ ಕುಟುಂಬದ 7 ಮಂದಿ ಸಾವು

12:14 PM Apr 08, 2018 | Team Udayavani |

ವಿರುಧುನಗರ್‌: ಇಲ್ಲಿನ ರಾಜಪಾಳ್ಯಂ ಸಮೀಪ ಕಾರು ಮತ್ತು ಲಾರಿ ನಡುವೆ ನಡೆದಿರುವ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಬೆಂಗಳೂರಿನ ಒಂದೇ ಕುಟುಂಬದ ಏಳು ಮಂದಿ ದುರಂತ ಸಾವಿಗೀಡಾಗಿದ್ದಾರೆ. ಮೃತರೆಲ್ಲರೂ ಬೆಂಗಳೂರಿನ ಸಂಗಣ್ಣ ಗೌಡ ಎಂಬುವರ ಮನೆಯವರು ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ.

Advertisement

ಈ ಕುಟುಂಬವು ಇತ್ತೀಚೆಗೆ ಕೇರಳ ಪ್ರವಾಸಕ್ಕೆಂದು ತೆರಳಿತ್ತು. ಶನಿವಾರ ತಿರುವನಂತಪುರದಿಂದ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದರೆ, ಮತ್ತೂಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿ ಚಾಲಕನನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಪಘಾತ ನಡೆದ ಹಿನ್ನೆಲೆಯಲ್ಲಿ, ರಾಜಾಪಾಳ್ಯಂ ಹಾಗೂ ತೆಂಕಾಸಿ ರಸ್ತೆಯಲ್ಲಿ ಹಲವು ಗಂಟೆಗಳವರೆಗೆ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next