Advertisement

ಚಂಡ್ತಿಮಾರ್‌: ದ್ವಿಚಕ್ರ ವಾಹನಕ್ಕೆ ಸಿಮೆಂಟ್‌ ಮಿಕ್ಸರ್‌ ಲಾರಿ ಢಿಕ್ಕಿ; ಇಬ್ಬರಿಗೆ ಗಾಯ

06:07 PM Jan 12, 2023 | Team Udayavani |

ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ದ್ವಿಚಕ್ರವಾಹನವೊಂದಕ್ಕೆ ಸಿಮೆಂಟ್‌ ಮಿಕ್ಸರ್‌ ಲಾರಿಯೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಹಾಗೂ ಸಹಸವಾರೆ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

Advertisement

ಘಟನೆಯಲ್ಲಿ ಸವಾರ ಸರಪಾಡಿ ಗ್ರಾಮದ ವಚ್ಚಾರು ನಿವಾಸಿ ಸಂತೋಷ್‌ ಅಂಚನ್‌ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ತಾಯಿ ಸಹಸವಾರೆ ರಾಜೀವಿ ಅವರಿಗೆ ಕೊಂಚ ಹೆಚ್ಚಿನ ಗಾಯಗಳಾಗಿವೆ ಎನ್ನಲಾಗಿದೆ. ಗಾಯಗೊಂಡವರು ತುಂಬೆ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯು ಅಭಿವೃದ್ಧಿಗೊಂಡ ಬಳಿಕ ನಿರಂತರವಾಗಿ ಅಪಘಾತಗಳು ಉಂಟಾಗುತ್ತಿದ್ದು, ಜಕ್ರಿಬೆಟ್ಟು ಚಂಡ್ತಿಮಾರ್‌ ಪ್ರದೇಶವು ಡೆತ್‌ ಸ್ಪಾಟ್‌ ಆಗಿ ಮಾರ್ಪಟ್ಟಿದೆ. ಈಗಾಗಲೇ ಇಲ್ಲಿ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಕಾರು ಚಾಲಕರು ಮೃತಪಟ್ಟಿದ್ದಾರೆ. ಸಣ್ಣ ಪುಟ್ಟು ಅಪಘಾತಗಳು ನಿರಂತರವಾಗಿ ನಡೆಯುತ್ತಲೇ ಇದ್ದು, ಗುರುವಾರವೂ ಮೂರ್‍ನಾಲ್ಕು ಸಣ್ಣಪುಟ್ಟ ಅಪಘಾತಗಳು ಸಂಭವಿಸಿದೆ ಎನ್ನಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next