Advertisement

ಗುಂಡ್ಲುಪೇಟೆ: ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಸಾವು, ಮತ್ತೊಬ್ಬ ಗಂಭೀರ

02:34 PM May 17, 2022 | Team Udayavani |

ಗುಂಡ್ಲುಪೇಟೆ (ಚಾಮರಾಜನಗರ): ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ರಾಘವಾಪುರ ಗೇಟ್ ಬಳಿ ಮಂಗಳವಾರ ನಡೆದಿದೆ.

Advertisement

ತಾಲೂಕಿನ ಬೆಂಡರವಾಡಿ ಗ್ರಾಮದ ಮನು (23) ಮೃತ ಯುವಕ. ಗುಂಡ್ಲುಪೇಟೆ ಪಟ್ಟಣದ ತೋಟದ ಬೀದಿಯ ನಿವಾಸಿ ನಾಗರಾಜು (33) ಎಂಬಾತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಕೇರಳದ ಮಲಪುರಂನ ಮಾಧವನ್ ಎಂಬಾತನ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓವರ್ ಟೇಕ್ ಮಾಡುವ ಭರದಲ್ಲಿ ಈ ಅವಘಡ ಉಂಟಾಗಿದೆ ಎನ್ನಲಾಗಿದೆ.

ಸದ್ಯ ಎರಡು ವಾಹನಗಳನ್ನು ವಶಕ್ಕೆ ಪಡೆದು ಬೇಗೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next