Advertisement

ನಿಯಂತ್ರಣ ತಪ್ಪಿ ದರ್ಗಾಕ್ಕೆ ಢಿಕ್ಕಿ ಹೊಡೆದ ಕಾರು: ಮೂವರು ಸ್ಥಳದಲ್ಲೇ ಸಾವು

01:18 PM Aug 07, 2022 | Team Udayavani |

ಹುಬ್ಬಳ್ಳಿ: ಕುಂದಗೋಳ ತಾಲೂಕಿನ ಪೂನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಜಿಗಳೂರು ಬಳಿಯ ದರ್ಗಾವೊಂದಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಪತಿ-ಪತ್ನಿ, ಅಳಿಯ ಸಾವಿಗೀಡಾಗಿದ್ದು, ಮಗಳು ಗಂಭೀರ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ.

Advertisement

ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ಬರುವ ಸಮಯದಲ್ಲಿ ನಿಯಂತ್ರಣ ತಪ್ಪಿ ದರ್ಗಾಗೆ ಕಾರು ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ ಕೆಲಸ ಮಾಡುತ್ತಿದ್ದ ಬೀದರ್ ಮೂಲದ ಬಿಎಸ್ಎಫ್ ಯೋಧ ಸಾವು

ಕೆಯುಡಿಯ ಎಇಇ ರವೀಂದ್ರ ನಾಗನಾಥ, ಇವರ ಮಾವ ಹನಮಂತಪ್ಪ ಬೇವಿನಕಟ್ಟಿ, ಅತ್ತೆ ರೇಣುಕಾ ಬೇವಿನಕಟ್ಟಿ ಸ್ಥಳದಲ್ಲಿ ಸಾವಿಗೀಡಾಗಿದ್ದು, ರವೀಂದ್ರ ಅವರ ಪತ್ನಿ ಅರುಂಧತಿಗೆ ಗಂಭೀರ ಗಾಯಗಳಾಗಿವೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕುಂದಗೋಳ ಠಾಣೆ ಇನ್ಸಪೆಕ್ಟರ್ ಮಾರುತಿ ಗುಳ್ಳಾರಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next