Advertisement

ಕೋಲಾರ ಬಳಿ ಕಾರು ಮರಕ್ಕೆ ಢಿಕ್ಕಿಯಾಗಿ ಇಬ್ಬರ ಸಾವು –ಮೂವರಿಗೆ ಗಾಯ

06:12 PM Sep 11, 2022 | Team Udayavani |

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೋಲಾರ-ಬೇತಮಂಗಲ ರಸ್ತೆಯ ಶಾಪೂರು ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ ನಡೆದಿದೆ.

Advertisement

ತಮಿಳುನಾಡಿನ ಚೆನ್ನೈನವರೆನ್ನಲಾದ  ವಿಮಲ್ (27), ಶರೀನ (22) ಮೃತಪಟ್ಟವರಾಗಿದ್ದು, ಕಾರಿನಲ್ಲಿದ್ದ ಹರ್ಷಿತ, ಡೇವಿಡ್, ವಿಮೋನಿಯಲ್ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದು, ಕೋಲಾರ ಹೊರವಲಯದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶರೀನ, ಹರ್ಷಿತ, ಡೇವಿಡ್, ವಿಮೋನಿಯಲ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಚೆನ್ನೈನಿಂದ  ಕಾರು ಬಾಡಿಗೆಗೆ ಪಡೆದು ಬೆಂಗಳೂರಿನತ್ತ ಸಾಗುತ್ತಿದ್ದರು. ಈ ವೇಳೆ ಚಾಲಕ ವಿಮಲ್ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಢಿಕ್ಕಿ ಹೊಡೆದಿದೆ.

ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ವಿಮಲ್, ಶರೀನಾರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೋಲಾರ ಗ್ರಾಮಾಂತರ ಠಾಣೆ ಸಿಬ್ಬಂದಿ ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next