Advertisement

ಗುರುಪುರ: ಬೈಕ್ ಸವಾರನಿಗೆ ಮೃತ್ಯುವಾದ ವೇಗದೂತ ಬಸ್  

06:38 AM Mar 19, 2019 | Team Udayavani |

ಗುರುಪುರ: ಕಾರ್ಕಳದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಗದೂತ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಗುರುಪುರದಲ್ಲಿ ನಡೆದಿದೆ. 

Advertisement

ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರರನ್ನು ಮೂಡಬಿದ್ರೆ ಸಮೀಪದ ಬೆಳುವಾಯಿಯ ಮಹೇಹ್ ಲಮಾಣಿ (32) ಎಂದು ಗುರುತಿಸಲಾಗಿದೆ. 

ಬೆಳಿಗ್ಗೆ ಸುಮಾರು ಒಂದು ಗಂಟೆ ಸುಮಾರಿಗೆ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮೊದಲು ಕೈಕಂಬಕ್ಕೆ ಹೋಗುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದ್ದು ನಂತರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ರಸ್ತೆಯ ಒಂದು ಕಡೆ ಬಿದ್ದರೆ ಸವಾರ ಮತ್ತೊಂದು ಕಡೆ ಬಿದ್ದಿದ್ದರು. ರಸ್ತೆಯ ಮೇಲೆ ಬಿದ್ದ ಮಹೇಶ್ ಅವರ ಮೇಲೆ ಬಸ್ ಚಲಿಸಿದ್ದು, ಅವರ ಮೃತದೇಹ ಛಿದ್ರಛಿದ್ರವಾಗಿದೆ. ಬಜಪೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ಸಂಚಾರ ಅಸ್ತವ್ಯಸ್ತ: ಗುರುಪುರ ಜಂಕ್ಷನ್ ನಲ್ಲಿ ನಡೆದ ಈ ಅಪಘಾತದಿಂದ ಹೆದ್ದಾರಿಯಲ್ಲಿ ಸುಮಾರು ಒಂದುವರೆ ಗಂಟೆಗಳ ಕಾಲ ಸಂಚಾರ ಸ್ಥಗಿತವಾಗಿತ್ತು. ನಂತರ ಪೊಲೀಸರು ಪರ್ಯಾಯ ವ್ಯವಸ್ಥೆ ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.  

Advertisement

Udayavani is now on Telegram. Click here to join our channel and stay updated with the latest news.

Next