Advertisement

ಬೈಕ್- ಗ್ಯಾಸ್  ಟ್ಯಾಂಕರ್ ಡಿಕ್ಕಿ: ಟ್ಯಾಂಕರ್ ಪಲ್ಟಿ:ಬೈಕ್ ಸವಾರ ಸಾವು

05:00 PM Nov 23, 2018 | |

ನೆಲ್ಯಾಡಿ: ಮಂಗಳೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬೆಳ್ತಂಗಡಿ ತಾಲೂಕಿನ ನೆಲ್ಯಾಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. 

Advertisement

ಅಪಘಾತದ ರಭಸಕ್ಕೆ ಬೈಕ್ ಸವಾರ ಸಾವನ್ನಪ್ಪಿದ್ದು, ಅವರ ದೇಹ ಛಿದ್ರ ಛಿದ್ರವಾಗಿ ರಸ್ತೆಯಲ್ಲಿ ಬಿದ್ದಿದೆ. ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು,ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. 


ಮೃತ ದುರ್ದೈವಿಯನ್ನು ಜಗದೀಶ (44) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next