Advertisement

ರಾಯಚೂರು: ಕಾರು -ಲಾರಿ ಮುಖಾಮುಖಿ ಢಿಕ್ಕಿ; ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

02:42 PM Jul 18, 2022 | Team Udayavani |

ರಾಯಚೂರು: ಕಾರು – ಲಾರಿ ನಡುವೆ ಢಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಸೋಮವಾರು ಮುಂಜಾನೆ ( ಜು.18 ರಂದು) ನಡೆದಿದೆ.

Advertisement

ಮೃತರನ್ನು ಮಧ್ಯಪ್ರದೇಶ ಮೂಲದ  ಅಮರದೀಪ್‌ ಸೆಕ್ಸೇನಾ​ (35), ಪೂರ್ಣಿಮಾ ಸೆಕ್ಸೇನಾ (30) ಮಕ್ಕಳಾದ ಜಿತಿನ್​ (12) ಮತ್ತು ಮಾಹೀನ್​ (7) ಎಂದು ಗುರುತಿಸಲಾಗಿದೆ.

ಎರಡು ವಾಹನಗಳು ಮುಖಾಮುಖಿ ಢಿಕ್ಕಿಯಾಗಿದ್ದು, ದುರ್ಘಟನೆ ಸಂಭವಿಸಿದೆ. ಮೃತ ನಾಲ್ವರು  ಮೂಲದವರು ಎಂದು ಗುರುತಿಸಲಾಗಿದೆ. ಎರಡು ಜೆಸಿಬಿಯಿಂದ ಅಪಘಾತ ವಾಹನಗಳ ತೆರವು ಮಾಡಿದ್ದು, ಮೃತ ದೇಹಗಳನ್ನು ಸಿಂಧನೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next