Advertisement

ತುಮಕೂರು : ಬಸ್‌ಗಳೆರಡರ ಢಿಕ್ಕಿ; ಸ್ಥಳದಲ್ಲೇ ಮೂವರ ಸಾವು 

09:37 AM Aug 28, 2018 | |

ಶಿರಾ: ರಾಷ್ಟ್ರೀಯ ಹೆದ್ದಾರಿಯ 4 ರ ಕಳ್ಳಂಬೆಳ್ಳ ಬಳಿ ಮಂಗಳವಾರ ಬೆಳ್ಳಂಬೆಳಗ್ಗೆ  ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಖಾಸಗಿ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು  ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ 10 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್‌ಪಟ್ಟಿದ್ದಾರೆ. 

Advertisement

ಚಿತ್ರದುರ್ಗದ ಕಡೆ ಬರುತ್ತಿದ್ದ ಸರ್ಕಾರಿ ಬಸ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಖಾಸಗಿ ಬಸ್‌ ಗುದ್ದಿದೆ. ಪರಿಣಾಮವಾಗಿ ಸರ್ಕಾರಿ ಬಸ್‌ನಲ್ಲಿದ್ದ ಇಬ್ಬರು ಮತ್ತು ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಮೃತ ದುರ್ದೈವಿಗಳು ಕಾರವಾರ ಮೂಲದ ಪರಮೇಶ್ವರ ನಾಯ್ಕ (50)ಬೆಂಗಳೂರು ಮೂಲದ ನಿಖಿತಾ(27) ಮತ್ತು 
ಧನರಾಜ್‌(45) ಎಂದು ತಿಳಿದು ಬಂದಿದೆ. 

ಕಳ್ಳಂಬೆಳ್ಳ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next