Advertisement

ದೇವನಹಳ್ಳಿಯಲ್ಲಿ ಅಪಘಾತ ; ಗ್ಯಾಸ್‌ ಸಿಲಿಂಡರ್‌ಗಳಿದ್ದ ಲಾರಿಗೆ ಬೆಂಕಿ 

11:26 AM Oct 24, 2018 | Team Udayavani |

ಬೆಂಗಳೂರು: ದೇವನಹಳ್ಳಿಯ ಕಟ್ಟುಗೊಲ್ಲನ ಹಳ್ಳಿ ಬಳಿ ಗ್ಯಾಸ್‌ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ  ಲಾರಿ ಮತ್ತು ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು,ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಲಾರಿ ಹೊತ್ತಿ ಉರಿದಿದೆ. 

Advertisement

ಅಪಘಾತದ ತೀವ್ರತೆಗೆ ಲಾರಿಯ ಡಿಸೇಲ್‌ ಟ್ಯಾಂಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು , ಕ್ಷಣದಲ್ಲಿ ಸಿಲಿಂಡರ್‌ಗಳಿಗೂ ತಗುಲಿದೆ. ಕೆಲ ಸಿಲಿಂಡರ್‌ಗಳು ಸ್ಫೋಟಗೊಂಡಿರುವ ಬಗ್ಗೆ ವರದಿಯಾಗಿದೆ. 

ಸ್ಥಳದಲ್ಲಿ 4 ಅಗ್ನಿ ಶಾಮಕ ದಳದ ವಾಹನಗಳು ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. 

ಆವಲಹಳ್ಳಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next