Advertisement

ಅಪರಿಚಿತ ವಾಹನ ಡಿಕ್ಕಿ: ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವು

08:04 AM Sep 12, 2017 | |

ಚಿತ್ರದುರ್ಗ: ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕು ಹಿರಿಯಮ್ಮನಹಳ್ಳಿ ಬಳಿ  ಸೋಮವಾರ ತಡರಾತ್ರಿ ನಡೆದಿದೆ.

Advertisement

ಜಗದೀಶ(25ವರ್ಷ) ಹಾಗೂ ಶ್ರೀನಿವಾಸ(26ವರ್ಷ) ಮೃತಪಟ್ಟ ದುರ್ದೈವಿಗಳು. ಇಬ್ಬರು ಬಾರ್‌ವೊಂದರಲ್ಲಿ  ಕೆಲಸ ಮಾಡಿಕೊಂಡಿದ್ದರೆಂದು ತಿಳಿದು ಬಂದಿದೆ. ಅಪಘಾತದ ಬಳಿಕ ಸ್ಥಳದಿಂದ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.

ತಳಕು ಪೊಲೀಸ್‌ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next