Advertisement

Bangalore: ಚಿತ್ರೀಕರಣದ ವೇಳೆ ಅವಘಡ; ನಟ ಮಂಡ್ಯ ರಮೇಶ್‌ಗೆ ತೀವ್ರಗಾಯ

12:45 PM Nov 30, 2023 | Team Udayavani |

ಬೆಂಗಳೂರು: ಚಿತ್ರೀಕರಣದ ವೇಳೆ ಅವಘಡ ಉಂಟಾಗಿ ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್‌ ಅವರಿಗೆ ತೀವ್ರತರದ ಗಾಯಗಳಾಗಿವೆ ಎಂದು ವರದಿಯಾಗಿದೆ.

Advertisement

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಯೊಂದರ ಚಿತ್ರೀಕರಣದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದ ಹೊರಭಾಗದಲ್ಲಿರುವ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದು‌, ಅವರಿಗೆ ತೀವ್ರತರದ ಗಾಯಗಳಾಗಿವೆ ಎಂದು ವರದಿಯಾಗಿದೆ. ಘಟನೆಯ ಪರಿಣಾಮ ಮಂಡ್ಯ ರಮೇಶ್‌ ಅವರ ಮುಂಗೈ ಹಾಗೂ ಬಲಗಾಲಿಗೆ ಗಾಯವಾಗಿದೆ ಎನ್ನಲಾಗಿದೆ.

ಸದ್ಯ‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು‌, ಸೂಕ್ತ‌ ಚಿಕತ್ಸೆ ನೀಡಲಾಗುತ್ತಿದೆ. ಎರಡು – ಮೂರು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಚ್ಚಾರ್ಜ್‌ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next