Advertisement

ಭಟ್ಕಳದಲ್ಲಿ  ಭೀಕರ ಅಪಘಾತ; ಮತ್ಸ್ಯೋದ್ಯಮಿ ಸಾವು; 3 ಗಂಭೀರ 

04:50 PM Mar 06, 2018 | Team Udayavani |

ಭಟ್ಕಳ: ಇಲ್ಲಿನ ಶಿರಾಲಿ ಬಳಿಯ ಮಾವಿನಕಟ್ಟೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಕಾರಿಗೆ ಪೆಟ್ರೋಲ್‌ ಟ್ಯಾಂಕರ್‌ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ  ಕುಂದಾಪುರ ಉಪ್ಪುಂದದ ಮತ್ಸ್ಯೋದ್ಯಮಿ ಅಣ್ಣಪ್ಪ ಖಾರ್ವಿ (33) ಅವರು ದಾರುಣವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇತರ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಗಾಯಾಳುಗಳ ಪೈಕಿ ಮೂವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಎಂದು ತಿಳಿದು ಬಂದಿದೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರಿನಲ್ಲಿದ್ದ ಪ್ರಭಾಕರ , ನಾಗವೇಣಿ, ಸುಬ್ರಹ್ಮಣ್ಯ ಮತ್ತು ಮುಕುಂದ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಅಪಘಾತದ ತೀವ್ರತೆಗೆ ಕಾರು ಎದುರುಗಡೆಯಿಂದ ನಜ್ಜುಗುಜ್ಜಾಗಿದ್ದು , ಟ್ಯಾಂಕರ್‌ ಪಲ್ಟಿಯಾಗಿದೆ.

Advertisement

ಮುರುಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next