Advertisement

ಭೀಕರ ಅಪಘಾತ:ನಿಶ್ಚಿತಾರ್ಥ ಮುಗಿಸಿ ಬರುತ್ತಿದ್ದ ನಾಲ್ವರ ದುರ್ಮರಣ

09:13 AM Dec 30, 2017 | |

ಬಾಗಲಕೋಟೆ: ಹುನಗುಂದದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಸುಕಿನ ವೇಳೆ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿಯಾಗಿ ಸಂಭವಿಸಿದ ಭೀಕರ ಅವಘಡದಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 

Advertisement

ಮೃತ ದುರ್ದೈವಿಗಳು ಬಳ್ಳಾರಿಯಿಂದ ನಿಶ್ಚಿತಾರ್ಥ ಮುಗಿಸಿಕೊಂಡು ವಾಪಾಸಾಗುತ್ತಿದ್ದರು ಎಂದು ತಿಳಿದು ಬಂದಿದೆ. 

ಮೃತರನ್ನು ಪಂಕಜ್‌ ಸಿಂಗಿ (48), ಉಮಾಬಾಯಿ ಸಿಂಗಿ (48), ಪುಷ್ಪಾಬಾಯಿ ಧರಕ್‌(62)ಹಾಗೂ ಶ್ರೀಕಾಂತಾ ಬಾಯಿ ಧರಕ್‌(65) ಎಂದು ತಿಳಿದು ಬಂದಿದೆ. 

ಅವಘಡದಲ್ಲಿ ಕಾರಿನಲ್ಲಿದ್ದ ದೀಪಕ್‌, ಸುನಿಲ್‌ ಮತ್ತು ಶ್ರೀಧರ್‌ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿದ್ದುಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಹುನಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next