Advertisement

ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು

06:01 PM Aug 09, 2018 | Team Udayavani |

ಹೆಬ್ರಿ: ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸೋಮೇಶ್ವರದ ಕಾಸನಮಕ್ಕಿ ಎಂಬಲ್ಲಿ ಗುರುವಾರ ನಡೆದಿದೆ.

Advertisement

ದ್ವಿಚಕ್ರ ವಾಹನವನ್ನು ಚಲಾಯಿಸುತ್ತಿದ್ದ ಮಡಾಮಕ್ಕಿಯ ಶಂಕರ ಕುಲಾಲ (55) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಶಂಕರ ಕುಲಾಲ ಸೋಮೇಶ್ವರದಿಂದ ಮಡಾಮಕ್ಕಿ ಕಡೆ ಹೋಗುವಾಗ ಎದುರು ದಿಕ್ಕಿನಿಂದ ಬಂದ ಖಾಸಗಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ  ಸಾವನ್ನಪ್ಪಿದರು. ಖಾಸಗಿ ಬಸ್ಸಿನ ಚಾಲಕನನ್ನು ಹೆಬ್ರಿ ಪೊಲೀಸರು ವಶಕ್ಕೆ  ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ .

Advertisement

Udayavani is now on Telegram. Click here to join our channel and stay updated with the latest news.

Next