Advertisement

ಅಡ್ಕಾರು ಮಾವಿನಕಟ್ಟೆ ಬಳಿ ಭೀಕರ ಅಪಘಾತ: ಇಬ್ಬರು ಸಾವು

09:44 AM Oct 12, 2019 | mahesh |

ಸುಳ್ಯ : ಕಳೆದ ವಾರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಸ್ಥಳದಲ್ಲಿ ಶುಕ್ರವಾರ ಸಂಜೆ ಬಸ್ ಮತ್ತು ಇನೋವಾ ವಾಹನ ಪರಸ್ಪರ ಢಿಕ್ಕಿ ಹೊಡೆದುಕೊಂಡು ಇನೋವಾದಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರು ಸಮೀಪದ ಮಾವಿನಕಟ್ಟೆ ಬಳಿ ನಡೆದಿದೆ.

Advertisement

ಬಂಟ್ವಾಳ ತಾಲೂಕಿನ ಕೆದಿಲ ಕಂಪ ನಿವಾಸಿ ಅಬ್ದುಲ್ ಖಾದರ್ ರವರ ಪುತ್ರ ಮಜೀದ್ ( 32 ) ಮತ್ತು ಪುತ್ತೂರು ತಾಲೂಕು ಕಬಕ ನಿವಾಸಿ ಉಮ್ಮರ್ ಅವರ ಪುತ್ರ ಮಹಮ್ಮದ್ ಸಾದಿಕ್ ( 31 ) ಸ್ಥಳದಲ್ಲೇ ಮೃತಪಟ್ಟರು. ಮೃತದೇಹಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್‌ನಲ್ಲಿ ತರಲಾಗಿದೆ. ಇನೋವಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸುಳ್ಯದ ವಿದ್ಯಾಸಾಗರ ರಾವ್ ಅವರು ತನ್ನ ಕಾರಿನಲ್ಲಿ ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

ಇನೋವಾ ಕಾರು (KA 22 N.7974) ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿತ್ತು. ಬಸ್ (KL 15 A 1747) ಕೇರಳ ಬಸ್ ಸುಳ್ಯದ ಕಡೆಗೆ ಬರುತ್ತಿತ್ತು.

Advertisement

Udayavani is now on Telegram. Click here to join our channel and stay updated with the latest news.

Next