Advertisement

ಮತಗಟ್ಟೆ ಸಿಬ್ಬಂದಿ ಪಯಣಿಸುತ್ತಿ ಬಸ್ ಗೆ ಟಿಪ್ಪರ್ ಡಿಕ್ಕಿ: 25 ಜನರಿಗೆ ಗಾಯ, ಓರ್ವನ ಗಂಭೀರ

09:07 PM Dec 22, 2020 | mahesh |

ವಿಜಯಪುರ : ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆಯಲ್ಲಿ ಮತಗಟ್ಟೆ ಕರ್ತವ್ಯ ಮುಗಿಸಿ‌ ಮರಳುತ್ತಿದ್ದ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್ ಗೆ ಟಿಪ್ಪರ್ ಡಿಕ್ಕಿ ಹೊಡೆದು, 25 ಜನರು ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನಲ್ಲಿ ಜರುಗಿದೆ.

Advertisement

ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಬಳಿ ಮತಗಟ್ಟೆ ಸಿಬ್ಬಂದಿ ಕರ್ತವ್ಯ ಮುಗಿಸಿ, ಮತಪೆಟ್ಡಿಗೆ‌ ಸಮೇತ ಬಸ್ ನಲ್ಲಿ ಮುದ್ದೇಬಿಹಾಳ ಪಟ್ಟಣಕ್ಕೆ ಮರಳುತ್ತಿದ್ದರು. ಈ ಹಂತದಲ್ಲಿ ಸಿಬ್ಬಂದಿ ಇದ್ದ ಬಸ್ ಗೆ ಟಿಪ್ಪರ್ ಡಿಕ್ಕಿ ಹೊಡೆದು 25 ಜನರಿಗೆ ಗಾಯಗಳಾಗಿವೆ. ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.

ಘಟನೆ ಸಂಭವಿಸಿದ ಸುದ್ದಿ ತಿಳಿಯುತ್ತಲೇ ಗಾಯಾಳುಗಳನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಗಂಭೀರ ಸ್ಥಿತಿಯಲ್ಲಿ ಇರುವ ಓರ್ವ ಗಾಯಗಳುವನ್ನು ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ಚಿಂತನೆ ನಡೆದಿದೆ.

ಈ ಮಧ್ಯೆ ಅಪಘಾತ ಸಂಭವಿಸಿದರೂ ಸೀಲ್ ಮಾಡಿದ ಮತಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯಲ್ಲಿ ಡಿಮಸ್ಟರಿಂಗ್ ಕೇಂದ್ರಕ್ಕೆ ಸುರಕ್ಷಿತವಾಗಿ ತರಲಾಗಿದೆ.

ಘಟನೆಯ ಸುದ್ದಿ ತಿಳಿಯುತ್ತಲೇ ಉಪ ವಿಭಾಗಾಧಿಕಾರಿ ರಾಮಚಂದ್ರ ಗಡಾದೆ, ಹೆಚ್ಚುವರಿ ಎಸ್ಪಿ ರಾಮ ಅರಸಿದ್ಧಿ, ಮುದ್ದೇಬಿಹಾಳ ತಹಶಿಲ್ದಾರ ಎಂ.ಎಸ್.ಅರಕೇರಿ ಸೇರಿದಂತೆ‌ ಮುದ್ದೇಬಿಹಾಳ ಪೊಲೀಸರು ಸ್ಥಳಕ್ಕೆ ಧಾವಿಸಿ, ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next