Advertisement

ಹಳೆಯಂಗಡಿ ಬಳಿ ಭೀಕರ ಅಪಘಾತ : ಸ್ಕೂಟರ್ ಸವಾರ ಸಾವು

10:51 AM Aug 04, 2018 | |

ಹಳೆಯಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ8.30ಕ್ಕೆ ಹಳೆಯಂಗಡಿ ಪಾವಂಜೆ ಬಳಿ ನಡೆದಿದೆ. ಕೊಲ್ನಾಡು ನಿವಾಸಿ ರವೀಂದ್ರ ನಾಯಕ್ ( 45 ) ಸಾವನ್ನಪ್ಪಿದ ದುರ್ದೈವಿ.

Advertisement

ರವೀಂದ್ರ ನಾಯಕ್ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಸ್ಕೂಟರ್‌ಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ರವೀಂದ್ರ ನಾಯಕ್ ಸಮೀಪದಲ್ಲಿ ಚಲಿಸುತ್ತಿದ್ದ ಲಾರಿಯ ಅಡಿಗೆ ಬಿದ್ದು ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪೋಲಿಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಸುರತ್ಕಲ್ ನ ಎನ್‌ಐಟಿಕೆ ಸಂಸ್ಥೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆಂದು ಹೋಗುವ ಸಂದರ್ಭ ಈ ಘಟನೆ ನಡೆದಿದೆ. ಮೃತರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ. ಮಂಗಳೂರು ಉತ್ತರ ವಲಯ ಸಂಚಾರಿ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next