Advertisement

ಶಿರೂರು ನೀರ್ಗದ್ದೆ ಬಳಿ ಭೀಕರ ಅಪಘಾತ: ಲಾರಿಯಡಿಗೆ ಸಿಲುಕಿ ವ್ಯಕ್ತಿ ಸಾವು

12:03 AM Dec 27, 2020 | mahesh |

ಬೈಂದೂರು:ಮಂಗಳೂರಿನಿಂದ ಬಾಗಲಕೋಟೆಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಊಟಕ್ಕೆ ಬಸ್ ನಿಲ್ಲಿಸಿದಾಗ ಬಹಿರ್ದೇಸೆಗಾಗಿ ಹೆದ್ದಾರಿ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ದೇಹ ಛಿದ್ರ ಛಿದ್ರಗೊಂಡಿರುವ ಘಟನೆ ಶಿರೂರು ನೀರ್ಗದ್ದೆ ಬಳಿ ನಡೆಸಿದೆ.

Advertisement

ಮೃತ ವ್ಯಕ್ತಿಯನ್ನು ಬಾಗಲಕೋಟ ಜಿಲ್ಲೆ ಹುಲಗುಂದ ತಾಲೂಕಿನ ಮೈಲಾರಪ್ಪ (60)ಎಂದು ಗುರುತಿಸಲಾಗಿದೆ. ಇಲ್ಲಿನ ಹೋಟೆಲ್ ಬಳಿ ಬಸ್ ನಿಲ್ಲಿಸಿದಾಗ ರಸ್ತೆ ದಾಟುತ್ತಿದ್ದ ಸಂಧರ್ಭ ಇಳಿಜಾರಿನಲ್ಲಿ ಕೋಕ್ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.

ಬೈಂದೂರು ಆರಕ್ಷಕ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next