Advertisement

ಕಟಪಾಡಿ: ರಾಷ್ಟೀಯ ಹೆದ್ದಾರಿ 66 ರಲ್ಲಿ ವಾಹನ ಪಲ್ಟಿ; ಇಬ್ಬರಿಗೆ ಗಾಯ

04:12 PM Feb 05, 2022 | Team Udayavani |

ಕಟಪಾಡಿ : ವಾಹನವೊಂದು ಪಲ್ಟಿ ಹೊಡೆದು ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೇಕಲ್ ತೋಟ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

Advertisement

ಸೆಂಟ್ರಿಂಗ್ ಸಾಮಗ್ರಿ ಒಯ್ಯುವ ವಾಹನವು ಉಡುಪಿಯತ್ತ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಡಿವೈಡರ್ ಮೇಲೇರಿತ್ತು.ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಈ ಸಂದರ್ಭ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೋಯ್ಯುವಲ್ಲಿ ಸಾರ್ವಜನಿಕರೊಂದಿಗೆ ಸಹಕರಿಸಿದ್ದು ಕಾಪು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಕೆಲ ಹೊತ್ತು ವಾಹನಗಳ ಸುಗಮ ಸಂಚಾರಕ್ಕೆ ಅನಾನುಕೂಲವಾಗಿತ್ತು.

Advertisement

Advertisement

Udayavani is now on Telegram. Click here to join our channel and stay updated with the latest news.

Next