Advertisement

ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ : ಓರ್ವ ಸಾವು 

06:56 PM Jan 29, 2022 | Team Udayavani |

ಕುಣಿಗಲ್: ಎರಡು ಬೈಕ್‌ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಹಾಲಗೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ತಾಲೂಕಿನ ಚಿಕ್ಕಮಲಳವಾಡಿ ಗೊಲ್ಲರಹಟ್ಟಿ ಗ್ರಾಮದ ವಾಸಿ ಚಿಕ್ಕಣ್ಣ (35) ಮೃತ ಬೈಕ್ ಸವಾರ.

ಚಿಕ್ಕಣ್ಣ ಕಾರ್ಯನಿಮಿತ ಕುಣಿಗಲ್ ಪಟ್ಟಣಕ್ಕೆ ಬಂದು ತನ್ನ ಗ್ರಾಮ ಚಿಕ್ಕಮಲಳವಾಡಿ ಗೊಲ್ಲರಹಟ್ಟಿಗೆ  ದ್ವಿಚಕ್ರ ವಾಹನದಲ್ಲಿ ವಾಪಸ್ಸ್ ಹೋಗುತ್ತಿರುವಾಗ, ಹಾಲಗೋನಹಳ್ಳಿ ಗ್ರಾಮದ ಬಳಿ ತುಮಕೂರು ಕಡೆಯಿಂದ ಬಂದ ಮತ್ತೊಂದು ಬೈಕ್ ಢಿಕ್ಕಿ ಹೊಡೆದ  ಕಾರಣ ಚಿಕ್ಕಣ ತೀವ್ರವಾಗಿ  ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದ್ಯೋಯುವ ಮಾರ್ಗದ ಮಧ್ಯ ಮೃಪಟ್ಟಿದ್ದಾನೆ.

ಇದನ್ನೂ ಓದಿ: ಮಂಡ್ಯ: ಕತ್ತುಕೊಯ್ದು ವಿಚ್ಛೇದಿತ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ

ಮತ್ತೊಂದು ಬೈಕ್‌ನ ಸವಾರ ಕುಣಿಗಲ್ ಪಟ್ಟಣದ ತಬ್ರೇಜ್‌ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ.

Advertisement

ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

 

Advertisement

Udayavani is now on Telegram. Click here to join our channel and stay updated with the latest news.

Next