Advertisement

ಕೆಎಸ್ಆರ್ ಟಿಸಿ ಬಸ್ ಡಿಕ್ಕಿ: ಸ್ಥಳದಲ್ಲಿಯೇ ಐಟಿಐ ವಿದ್ಯಾರ್ಥಿ ಸಾವು

11:32 AM Dec 25, 2019 | Team Udayavani |

ಚಿಕ್ಕಬಳ್ಳಾಪುರ:  ಜಿಲ್ಲೆಯ ಚಿಂತಾಮಣಿ ಚೋಳುರು ರಸ್ತೆಯ ಚಿಲಕಲನೇರ್ಪು ಗ್ರಾಮದ ಸಮೀಪ ಕೆರೆ ಕಟ್ಟೆ ಮೇಲೆ ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ  ನಡುವೆ  ಡಿಕ್ಕಿಯಾಗಿ ಐಟಿಐ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

Advertisement

ಮೃತ ವಿದ್ಯಾರ್ಥಿಯನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಜ್ಜನ ವಾರಪಲ್ಲಿ ಗ್ರಾಮದ ಐಟಿಐ  ವಿದ್ಯಾರ್ಥಿ ಸುರೇಂದ್ರ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಕೆಂಚಾರ್ಲಹಳ್ಳಿ‌ ಗ್ರಾಮಾಂತರ ಠಾಣೆಯ ಪೊಲೀಸರು ‌ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ದೇಹವನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next