Advertisement

Badyar ಬಳಿ ಅಪಘಾತ, ಬೈಕ್‌ ಸವಾರ ಗಂಭೀರ

08:42 PM Sep 11, 2024 | Team Udayavani |

ಬೆಳ್ತಂಗಡಿ: ಗುರುವಾಯನಕೆರೆ ಮೂಡುಬಿದಿರೆ ರಸ್ತೆಯ ಬದ್ಯಾರು ಸಮೀಪ ಸೆ.11 ರಂದು ಸ್ಕೂಟರ್‌ಗೆ ಅಪರಿಚಿತ ವಾಹನ ಢಿಕ್ಕಿಹೊಡೆದು ಪರಾರಿಯಾಗಿದ್ದು, ಘಟನೆಯಲ್ಲಿ ಸ್ಕೂಟರ್‌ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಡಂಗಡಿ ನಿವಾಸಿ ಸುಜಿತ್‌ ಶೆಟ್ಟಿ (22) ಗಾಯಗೊಂಡಿದ್ದಾರೆ.

Advertisement

ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಇವರು ಬೆಳಗ್ಗೆ 4.30ರ ಸಮಾರಿಗೆ ಮನೆಯಿಂದ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ರಸ್ತೆಗೆಸೆಯಲ್ಪಟ್ಟಿದ್ದ ಸುಜಿತ್‌ ಶೆಟ್ಟಿ ಅವರ ತಲೆ, ಮುಖ ಹಾಗೂ ಮೈ ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಆಂಬುಲೆನ್ಸ್‌ ಚಾಲಕ ಜಲೀಲ್‌ ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವೆಸಗಿದ ವಾಹನ ನಿಲ್ಲಿಸದೆ ಪರಾರಿಯಾಗಿದೆ.

ಈ ಬಗ್ಗೆ ಸಂಚಾರಿ ಪೊಲೀಸರು ತನಿಖೆ ಆರಂಭಿಸಿದ್ದು ವಾಹನದ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next