Advertisement

ಭೀಕರ ಅಪಘಾತ: ನಾಲ್ವರು ದುರ್ಮರಣ, ಐವರಿಗೆ ಗಾಯ

09:32 AM Aug 25, 2019 | Mithun PG |

ಬೆಂಗಳೂರು: ಕಾರು ಪಲ್ಟಿಯಾಗಿ ನಾಲ್ವರು ದುರ್ಮರಣಗೊಂಡು ಐವರು ಗಾಯಗೊಂಡ ಘಟನೆ ದೇವನಹಳ್ಳಿ ತಾಲೂಕಿನ ಹಂದ್ರಹಳ್ಳಿಯಲ್ಲಿ ನಡೆದಿದೆ.

Advertisement

ನಂದಿ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದ್ದು, ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರು.

ಮೃತರನ್ನು ರಮೇಶ್ (30), ಮಂಜುನಾಥ್ (36) ಅಶೋಕ್ ರೆಡ್ಡಿ (26),ಗೌರಿಶ್ (23)  ಎಂದು ಗುರುತಿಸಲಾಗಿದ್ದು ಮೃತರೆಲ್ಲರೂ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಬಳಿಯ ನಕ್ಕಲಹಳ್ಳಿ ನಿವಾಸಿಗಳು.

ಗಾಯಗೊಂಡವರನ್ನು ಬೆಂಗಳೂರು ಮತ್ತು ಹೊಸಕೋಟೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚೆನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next