Advertisement

Road Mishap; ಸರಕಾರಿ ಬಸ್‌ಗಳ ಅಪಘಾತ; ಚಾಲಕರು ಸೇರಿದಂತೆ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

01:00 AM Aug 02, 2024 | Team Udayavani |

ಸುಬ್ರಹ್ಮಣ್ಯ: ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಮೀಪದ ಕಿದು ಸಿಪಿಸಿಆರ್‌ಐ ಎನ್ನುವಲ್ಲಿ ಗುರುವಾರ ಅಪಘಾತ ಸಂಭವಿಸಿದೆ.

Advertisement

ಸುಬ್ರಹ್ಮಣ್ಯ ಕಡೆಯಿಂದ ಉಪ್ಪಿ ನಂಗಡಿ ಕಡೆಗೆ ತೆರಳುತ್ತಿದ್ದ ಹಾಗೂ ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಎರಡೂ ಬಸ್‌ಗಳ ಚಾಲಕರು ಸೇರಿದಂತೆ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಗಾಯಾಳುಗಳು ಕಡಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇಬ್ಬರು ಪ್ರಯಾಣಿಕರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಪಘಾತದ ತೀವ್ರತೆಗೆ ಎರಡೂ ಬಸ್‌ಗಳ ಮುಂಭಾಗ ಜಖಂಗೊಂಡಿದೆ. ಘಟನೆಯಿಂದ ರಸ್ತೆಯಲ್ಲಿ ಬಸ್‌ಗಳು ಸಿಲುಕಿಕೊಂಡಿದ್ದು, ಇತರ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.

ಘಟನ ಸ್ಥಳಕ್ಕೆ ಆಗಮಿಸಿದ ಕಡಬ ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ವೇಣುಗೋಪಾಲ್‌, ಕಡಬ ಪೊಲೀಸರು ಹಾಗೂ ಸ್ಥಳೀಯರು ಬಸ್‌ಗಳನ್ನು ರಸ್ತೆ ಬದಿಗೆ ಸರಿಸಲು ವ್ಯವಸ್ಥೆ ಕಲ್ಪಿಸಿ ಇತರ ವಾಹನಗಳ ಓಡಾಟಕ್ಕೆ ಕ್ರಮ ಕೈಗೊಂಡರು. ಗಾಯಾಳುಗಳನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next