Advertisement

ಬೈಕ್‌ಗೆ ಟ್ರ್ಯಾಕ್ಟರ್‌ ಡಿಕ್ಕಿ: ಸ್ಥಳದಲ್ಲೇ ಯೋಧ ಸಾವು

12:30 AM Jan 20, 2019 | Team Udayavani |

ಚಿಕ್ಕೋಡಿ: ಕುಟುಂಬದೊಂದಿಗೆ ರಜೆ ಕಳೆಯಲು ಹುಟ್ಟೂರಿಗೆ ಬಂದಿದ್ದ ಯೋಧರೊಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆ ಶನಿವಾರ ನಸುಕಿನಲ್ಲಿ ನಡೆದಿದೆ. ಸಿಕಂದರ ಗೈಬುಸಾಬ ಮುಲ್ತಾನಿ(28) ಮೃತ ಯೋಧ. ತಾಲೂಕಿನ ನಾಗರಮುನ್ನೋಳ್ಳಿ ಗ್ರಾಮದ ಹತ್ತಿರ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ಮೇಲೆ ಟ್ರಾಕ್ಟರ್‌ ಮತ್ತು ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿ ಯೋಧ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Advertisement

ಕಳೆದ 9 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಿಕಂದರ ಮದ್ರಾಸ್‌ ಎಂಜಿನಿಯರಿಂಗ್‌ ಗ್ರೂಪ್‌ ಆಫ್‌ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ನಾಗರಮುನ್ನೋಳ್ಳಿ ಗ್ರಾಮದ ಹತ್ತಿರವಿರುವ ಕಬ್ಬೂರ ಪಟ್ಟಣದಲ್ಲಿ ನಡೆಯುತ್ತಿದ್ದ ಲಕ್ಷ್ಮೀ ದೇವಿ ಜಾತ್ರೆಗೆ ಹೋಗಿ ಮಧ್ಯರಾತ್ರಿ ಮನೆಗೆ ಹಿಂದಿರುಗುವಾಗ ಬೈಕ್‌ಗೆ ಟ್ರ್ಯಾಕ್ಟರ್‌ ಡಿಕ್ಕಿ ಹೊಡೆದು ಯೋಧ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next