Advertisement

ಚಾಲಕನ ನಿಯಂತ್ರಣ ತಪ್ಪಿ ಬೊಲೇರೋ ಪಲ್ಟಿ: ಓರ್ವ ಸಾವು, ಇಬ್ಬರಿಗೆ ಗಾಯ

09:05 AM Oct 20, 2019 | keerthan |

ಚಿತ್ರದುರ್ಗ: ಹಿರಿಯೂರು ತಾಲೂಕಿನ ಬಬ್ಬೂರು ಕ್ರಾಸ್​ ಬಳಿ ಶನಿವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಬೊಲೇರೋ ವಾಹನ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

Advertisement

ಹಿರಿಯೂರು ತಾಲೂಕಿನ ಧರ್ಮಪುರದ ರಂಗನಾಥ್​ ಬಾರ್​ ಮಾಲೀಕ ದೊಡ್ಡಯ್ಯ ಮೃತಪಟ್ಟ ವ್ಯಕ್ತಿ. ಅವರ ಜತೆಗಿದ್ದ ಇನ್ನಿಬ್ಬರು ಅಪಘಾತದಲ್ಲಿ ಗಾಯಗೊಂಡಿದ್ದು, ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರಿಯೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next