Advertisement

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

12:19 AM May 01, 2024 | Team Udayavani |

ಸುಳ್ಯ: ಮರ ಕಡಿಯುವ ಸಂದರ್ಭದಲ್ಲಿ ಮರದ ಕೊಂಬೆಯ ನಡುವೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ಮಂಗಳವಾರ ಸಂಭವಿಸಿದೆ.

Advertisement

ಕೇರ್ಪಳದ ಚಿನ್ನಪ್ಪ ನಾಯ್ಕ ಮೃತಪಟ್ಟವರು. ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ಅವರು ಮರವೊಂದನ್ನು ಕಡಿಯುತ್ತಿದ್ದ ವೇಳೆ ಮರದ ಬುಡ ಹಿಂದಕ್ಕೆ ಬಂದಿದ್ದು, ಈ ವೇಳೆ ಅಲ್ಲೇ ಇದ್ದ ಚಿನ್ನಪ್ಪ ಅವರು ಮರದ ಬುಡ ಮತ್ತು ಇನ್ನೊಂದು ಮರದ ನಡುವೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next